- Advertisement -
- Advertisement -
ಕುಂದಾಪುರ : ಬೈಕಿಗೆ ಟ್ರಾಕ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತೆಕ್ಕಟ್ಟೆ ಬಳಿ ಉಳ್ತೂರಿನಲ್ಲಿ ನಡೆದಿದೆ. ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ.
ಬೈಕ್ ಸವಾರನನ್ನು ಕೆದೂರು ನಿವಾಸಿ ಸೃಜನ್ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಈತನ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ತೆಕ್ಕಟ್ಟೆಯಿಂದ ಕೆದೂರು ಕಡೆಗೆ ಬೈಕಿನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಕೋಟ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -