- Advertisement -
- Advertisement -
ಪುತ್ತೂರು: ಬೈಕ್ ನಿಯಂತ್ರಣ ತಪ್ಪಿ ಪಾದಾಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ಮುಖ್ಯರಸ್ತೆ ಬೊಳುವಾರಿನಲ್ಲಿ ನಡೆದಿದೆ.
ಶಿವರಾಜ್ ಎಂಬವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಬನ್ನೂರು ಗ್ರಾಮದ ಅಬೂಬಕ್ಕರ್ ಎಂಬವರಿಗೆ ಡಿಕ್ಕಿಯಾಗಿದ್ದು, ಗಾಯಗೊಂಡ ಅಬೂಬಕ್ಕರ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -