Saturday, April 27, 2024
spot_imgspot_img
spot_imgspot_img

ಉಳ್ಳಾಲ: ಸ್ಕೂಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸಾವು

- Advertisement -G L Acharya panikkar
- Advertisement -

ಉಳ್ಳಾಲ: ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾಲ್ವರ ಪೈಕಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಿನ್ಯ ನಿವಾಸಿ ರಾಮಣ್ಣ (50), ಮಾಡೂರು ನಿವಾಸಿ ಸತೀಶ್ (34) ಮೃತಪಟ್ಟವರು.

‌ಸ್ಕೂಟರಿನಲ್ಲಿದ್ದ ಕಿನ್ಯ ನಿವಾಸಿ ರಾಮಣ್ಣ (50) ಮತ್ತು ಮಾಡೂರು ನಿವಾಸಿ ಸತೀಶ್ (34) ಸಾವನ್ನಪ್ಪಿದವರು. ಮಾಡೂರು ನಿವಾಸಿಗಳಾಗಿರುವ ಬೆನ್ಸನ್ ಮತ್ತು ನರೇಂದ್ರ ಎಂಬವರು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾ. 27 ರಂದು ರಾತ್ರಿ 10 ಗಂಟೆಗೆ ಕೊಂಡಾಣ ಕಟ್ಟೆ ಜಾತ್ರೆ ಮುಗಿಸಿ ವಾಪಸ್ಸಾಗುತ್ತಿದ್ದ ರಾಮಣ್ಣ ಮತ್ತು ಸತೀಶ್ ಎಂಬವರಿದ್ದ ಸ್ಕೂಟರಿಗೆ , ಎದುರಿನಿಂದ ಬಂದ ಬೆನ್ಸನ್, ನರೇಂದ್ರ ಅವರಿದ್ದ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿತ್ತು.

ಗಾಯಗೊಂಡಿದ್ದ ನಾಲ್ವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರಾಮಣ್ಣ ಅವರು ಮಾ. 28 ರಂದೇ‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರೆ, ಸತೀಶ್ ಅವರು ಮಾ. 30 ರಂದು ಸಾವನ್ನಪ್ಪಿದ್ದಾರೆ.‌ ಇಬ್ಬರೂ ಕೂಲಿ ಕಾರ್ಮಿಕರಾಗಿದ್ದು, ರಾಮಣ್ಣ ಅವರು ಮೂವರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಸತೀಶ್ ಅವಿವಾಹಿತರಾಗಿದ್ದರು. ನಾಗುರಿ‌ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!