Friday, May 3, 2024
spot_imgspot_img
spot_imgspot_img

ಬೈಕ್- ಕಾರು ಡಿಕ್ಕಿ; ಬೈಕ್ ಸವಾರ ಮೃತ್ಯು..!

- Advertisement -G L Acharya panikkar
- Advertisement -

ಬೈಕ್ ಮತ್ತು ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಸಹಸವಾರ ತೀವ್ರವಾಗಿ ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಬೈಕ್ ಸವಾರ ದಾವಣಗೆರೆ ತಾಲೂಕಿನ‌ ದ್ಯಾಮೇನಹಳ್ಳಿ ಗ್ರಾಮದ ಸಂತೋಷ (26) ಎಂದು ಗುರುತಿಸಲಾಗಿದೆ.

ಚನ್ನಗಿರಿ ಕಡೆಯಿಂದ ಸಂತೆಬೆನ್ನೂರಿಗೆ ಬರುತ್ತಿದ್ದ ಕಾರು ಹಾಗೂ ಎದುರು ಬರುತ್ತಿರುವ ಬೈಕ್ ಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಪರಸ್ಪರ ಡಿಕ್ಕಿ ಹೊಡೆದುಕೊಂಡ ಬಳಿಕ ಕಾರು ಮತ್ತು ಬೈಕ್‌ಗಳು ರಸ್ತೆಯಿಂದ ಕೆಳಗೆ ಜಿಗಿದು ಗುಂಡಿಗೆ ಬಿದ್ದಿವೆ. ಹೀಗಾಗಿ ಗಾಯಾಳುಗಳ ದೇಹಗಳು ಕೂಡಾ ಗುಂಡಿಯಲ್ಲೇ ಬಿದ್ದಿವೆ. ಬೈಕ್ ಮತ್ತು ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್‌ ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರ್ ನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟಗಾಯಗಳಾಗಿವೆ.

ಕಾರು ಚಿಕ್ಕಮಗಳೂರು ಮೂಲದ್ದು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಂತೆಬೆನ್ನೂರ ಹಾಗೂ ಚನ್ನಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಂತೆಬೆನ್ನೂರು ಠಾಣೆಯ‌ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ.

- Advertisement -

Related news

error: Content is protected !!