Saturday, April 27, 2024
spot_imgspot_img
spot_imgspot_img

*7 ಬೈಕ್ ಗಳ ಜೊತೆ 5 ಕುಖ್ಯಾತ ಕಳ್ಳರ ಬಂಧನ.!*

- Advertisement -G L Acharya panikkar
- Advertisement -

ಮಂಗಳೂರು: ಕಳವು ಮಾಡಿದ್ದ ಏಳು ಬೈಕ್ ಗಳ ಸಮೇತ ಐವರು ಕುಖ್ಯಾತ ಕಳ್ಳರನ್ನು ಬಂಧಿಸುವಲ್ಲಿ ಬಜ್ಪೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುರತ್ಕಲ್ 3 ನೇ ಬ್ಲಾಕ್ ಜನತಾ ಕಾಲೋನಿ ನಿವಾಸಿ ವಿಜಯ ಅಲಿಯಾಸ್ ವಿಜಯ ಬೋವಿ, ಗುರುಪುರ ಉಳಾಯಿಬೆಟ್ಟು ಪ್ರದೀಪ್ ಪೂಜಾರಿ(27), ಮೂಲ್ಕಿ ಚಿತ್ರಾಪು ಅಶ್ವಥಕಟ್ಟೆಯ ಬಳಿಯ ಅಭಿಜಿತ್(26), ಕೃಷ್ಣಾಪುರ 5ನೇ ಬ್ಲಾಕ್ ನಿವಾಸಿ ರಕ್ಷಿತ್ ಕುಲಾಲ್(22) ಮತ್ತು ಹೂಹಾಕುವಕಲ್ಲು ನಿವಾಸಿ ಸುದೀಶ್ ನಾಯರ್ ಅಲಿಯಾಸ್ ಸುದೀಶ್ ಕೆ.ಕೆ ಯಾನೆ ಮುನ್ನಾ(20) ಎಂದು ಹೆಸರಿಸಲಾಗಿದೆ.

1.ಆರೋಪಿ ವಿಜಯ ಎಂಬಾತನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ 3 ಬೈಕ್ ಕಳವು ಪ್ರಕರಣ,ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 3 ಬೈಕ್ ಕಳವು ಪ್ರಕರಣ ,ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ 1 ಬೈಕ್ ಕಳವು ಪ್ರಕರಣ, ಪಣಂಬೂರು ಪೊಲೀಸ್ ಠಾಣೆಯಲ್ಲಿ 1 ಬೈಕ್ ಕಳವು ಪ್ರಕರಣ, ಕಾವೂರಿನಲ್ಲಿ ಒಂದು ಬೈಕ್ ಕಳವು ಮತ್ತು ಒಂದು ಗಾಂಜಾ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.                                                                2.ಪ್ರದೀಪ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಭೂಗತ ಪಾತಕಿ ಮಾಡೂರು ಯುಸೂಪ್ ಕೊಲೆ ಪ್ರಕರಣ, ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಸಂಚು,ಪ್ರಕರಣ ದಾಖಲಾಗಿರುತ್ತದೆ.                                                                                                              3.ಅಭಿಜಿತ್ ಮೇಲೆ ಕಾಪು ಪೊಲೀಸ್ ಠಾಣೆಯಲ್ಲಿ ಹಲ್ಲೆ ಮತ್ತು ಗಲಾಟೆಗೆ ಸಂಬಂಧಿಸಿದ 3 ಪ್ರಕರಣ, ಮೈಸೂರು ನರಸಿಂಹ ರಾಜ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಯತ್ನ ಪ್ರಕರಣ, ಬಜಪೆ ಪೊಲೀಸ್ ಠಾಣೆಯಲ್ಲಿ 2 ಬೈಕ್ ಕಳವು ಪ್ರಕರಣ ದಾಖಲಾಗಿರುತ್ತದೆ.                                                    4.ರಕ್ಷಿತ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ, ಬಜ್ಪೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಬೈಕ್ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.                                5.ಆರೋಪಿ ಸುದೀಶ್ ನಾಯರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 3 ಬೈಕ್ ಕಳವು ಪ್ರಕರಣಗಳು, ಉಳ್ಳಾಲ್ ಪೊಲೀಸ್ ಠಾಣೆಯಲ್ಲಿ ಗಲಾಟೆಗೆ ಸಂಬಂಧಿಸಿದ 1 ಪ್ರಕರಣ, ಬಜ್ಪೆ ಮತ್ತು ಪಣಂಬೂರು ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಬೈಕ್ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.

ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಅವರ ಮಾರ್ಗದರ್ಶನದಂತೆ, ಎಸಿಪಿ ಅರುಣಾಂಶು ಗಿರಿ ಮತ್ತು ಲಕ್ಷ್ಮೀಗಣೇಶ್ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಬೆಳ್ಳಿಯಪ್ಪ ಮತ್ತು ಪೊಲೀಸ್ ನಿರೀಕ್ಷಕ ಕೆ. ಆರ್ ನಾಯ್ಕ್ ನೇತೃತ್ವದಲ್ಲಿ ಬಜ್ಪೆ ಪೊಲೀಸ್ ಠಾಣೆಯ ಅಪರಾಧ ಪತ್ತೆ ವಿಭಾಗದ ಪಿ.ಎಸ್.ಐ ಕಮಲಾ, ಪಿ.ಎಸ್.ಐ ಸತೀಶ್ ಎಂ.ಪಿ, ಪಿ.ಎಸ್.ಐ ರಾಘವೇಂದ್ರ ನಾಯ್ಕ, ಸಿಬ್ಬಂದಿ ಎ.ಎಸ್.ಐ ರಾಮ ಪೂಜಾರಿ, ರಾಮಚಂದ್ರ, ಹೊನ್ನಪ್ಪ ಗೌಡ, ಸುಧೀರ್ ಶೆಟ್ಟಿ, ರಾಜೇಶ್, ಸಂತೋಷ್ ಡಿ.ಕೆ., ರೋಹಿತ್ ಕುಮಾರ್, ವಕೀಲ್ ಎನ್ ಲಮಾಣಿ, ರಶೀದ ಶೇಖ್, ಕುಮಾರ್ ಸ್ವಾಮಿ ಮತ್ತು ಸಂಜೀವ ಅವರುಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

- Advertisement -

Related news

error: Content is protected !!