- Advertisement -
- Advertisement -



ಬೈಕ್ ಸವಾರನ ಮೇಲೆ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ
ನಡೆದಿದೆ.
ಮೃತಪಟ್ಟ ವ್ಯಕ್ತಿ ಪ್ರಸನ್ನ(37) ಎಂದು ಗುರುತಸಲಾಗಿದೆ.
ತುಮಕೂರು ರಸ್ತೆ ಕಡೆಯಿಂದ ಹೊಸೂರು ರಸ್ತೆ ಕಡೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದಿದ್ದ ವಾಹನ ಬೈಕ್ನ ಹ್ಯಾಂಡಲ್ಗೆ ಡಿಕ್ಕಿ ಹೊಡೆದಿದೆ. ಬೈಕ್ನಿಂದ ಕೆಳಗೆ ಬಿದ್ದು ಸವಾರನ ಮೇಲೆ ವಾಹನದ ಚಕ್ರ ಹರಿದಿದೆ. ಬಳಿಕ ವಾಹನ ಸಮೇತ ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೆಂಗೇರಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
- Advertisement -