- Advertisement -
- Advertisement -
ಬಿಎಂಟಿಸಿ ಬಸ್ ಚಕ್ರ ಹರಿದು ಬೈಕ್ ಸವಾರ ಮೃತಪಟ್ಟ ಘಟನೆ ಘಟನೆ ಉತ್ತರಹಳ್ಳಿ ರಸ್ತೆಯಲ್ಲಿರುವ ಆಲ್ಫೈನ್ ಅಪಾರ್ಟ್ಮೆಂಟ್ ಬಳಿ ನಡೆದೆ.
ಮೃತಪಟ್ಟ ಯುವಕ ತೇಜಸ್ (22) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಕೆಂಗೇರಿ ಪಿಜಿಯಲ್ಲಿ ವಾಸವಾಗಿದ್ದ ತೇಜಸ್ ಅವರು ಕಂಪ್ಯೂಟರ್ ಕ್ಲಾಸ್ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಏರೋನಾಟಿಕ್ಸ್ ಇಂಜಿನಿಯರಿಂಗ್ ಮುಗಿಸಿದ್ದ ತೇಜಸ್, ಮೂಲತಃ ತುಮಕೂರಿನ ತಿಪಟೂರಿನವರು.
ಬಿಎಂಟಿಸಿ ಬಸ್, ಮೈಸೂರು ರಸ್ತೆ ಕಡೆಯಿಂದ ಉತ್ತರಹಳ್ಳಿ ಕಡೆಗೆ ಆಗಮಿಸುತ್ತಿತ್ತು. ಈ ವೇಳೆ ಓವರ್ ಟೇಕ್ ಮಾಡಿ ಬರ್ತಿದ್ದ ಬೈಕ್ ಸವಾರನಿಗೆ ಬಸ್ ಟಚ್ ಆಗಿ ಕೆಳಗೆ ಬಿದ್ದಿದ್ದಾನೆ. ಬಸ್ ಬಲಭಾಗದ ಹಿಂಬದಿ ಚಕ್ರ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸಂಬಂಧ ಕೆಂಗೇರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -