- Advertisement -
- Advertisement -
ಕಾಸರಗೋಡು: ಬೈಕ್ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ನೀರು ಸಾಗಿಸುವ ಟ್ಯಾಂಕರ್ ಲಾರಿ ನಡುವೆ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡ ಘಟನೆ ನಯಬಜಾರ್ ಬಳಿಯ ಕುಕ್ಕಾರ್ನಲ್ಲಿ ಸಂಭವಿಸಿದೆ.
ಮಂಗಳೂರು ಕಾಲೇಜಿನ ಬಿ.ಕಾಂ ವಿದ್ಯಾರ್ಥಿ ಬಂಬ್ರಾಣ ಅಂಡಿತ್ತಡ್ಕ ನಿವಾಸಿ ಯೂಸಫ್ ಕೈಫ್ (೧೯) ಗಂಭೀರ ಗಾಯಗೊಂಡವರು.
ಯೂಸಫ್ ಕೈಫ್ ಕಾಲೇಜಿಗೆಂದು ತೆರಳುತ್ತಿದ್ದಾಗ ಕುಕ್ಕಾರ್ ಶಾಲೆ ಬಳಿಯ ಸರ್ವಿಸ್ ರಸ್ತೆಯಲ್ಲಿ ಯೂಸಫ್ ಕೈಫ್ ಸಂಚರಿಸುತ್ತಿದ್ದ ಬೈಕ್ ಹಾಗೂ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
- Advertisement -