- Advertisement -
- Advertisement -
ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಆರೋಪಿ ಶ್ರೀಕಿಯನ್ನು ಬಂಧಿಸಲಾಗಿದೆ.
2017ರಲ್ಲಿ ತುಮಕೂರು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 1.14 ಲಕ್ಷ ಮೌಲ್ಯದ 60.6 ಬಿಟ್ ಕಾಯಿನ ಕಳುವು ಆಗಿರುವ ಕುರಿತು ಆರೋಪದಡಿಯಲ್ಲಿ ಶ್ರೀಕಿಯನ್ನು ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದನು.
ಆರೋಪಿ ಶ್ರೀಕಿಯು ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದನು. ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಪ್ರತಿಬಾರಿಯೂ ಒಂದೊಂದು ಕಾರಣ ನೀಡುತ್ತಿದ್ದನು. ಇದೀಗ ಸಿಐಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
- Advertisement -