Friday, April 26, 2024
spot_imgspot_img
spot_imgspot_img

ಕೈ ಕಮಲ ಕಾರ್ಯಕರ್ತರ ನಡುವೆ ಮಾರಾಮಾರಿ; ಮೂವರಿಗೆ ಚೂರಿ ಇರಿತ

- Advertisement -G L Acharya panikkar
- Advertisement -

ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತ ನಡುವೆ ಮಾರಾಮಾರಿ ನಡೆದು ಮೂವರು ಚಾಕು ಇರಿತಕ್ಕೆ ಒಳಗಾದ ಘಟನೆ ನಡೆದಿದೆ. ಗದಗ ಜಿಲ್ಲೆ ಬೆಟಗೇರಿಯ ಮಂಜುನಾಥನಗರದಲ್ಲಿ ಘಟನೆ ನಡೆದಿದೆ.

ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಮೂವರಿಗೆ ಚಾಕು ಇರಿತ, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. 2 ಗುಂಪುಗಳು ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡದ್ದಾರೆ. ಶಿವರಾಜ್ ಪೂಜಾರ, ಮಲ್ಲೇಶ್ ಎಂಬುವರಿ​​ಗೆ ಗಂಭೀರ ಗಾಯವಾಗಿದ್ದು, ಗಜೇಂದ್ರಸಿಂಗ್ ಸೊಲ್ಲಾಪುರ ಸ್ಥಿತಿ ಚಿಂತಾಜನಕವಾಗಿದೆ.

ಬೆಟಗೇರಿ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನೂರಾರು ಜನರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದು, ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!