Sunday, June 29, 2025
spot_imgspot_img
spot_imgspot_img

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ

- Advertisement -
- Advertisement -

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ.

ಸಚಿವ ದಿನೇಶ್ ಗುಂಡೂರಾವ್​ ಪತ್ನಿ ತಬಸ್ಸುಮ್ ದಿನೇಶ್ ಗುಂಡೂರಾವ್ ಅವರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​​ಗೆ ಕೋರ್ಟ್​ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ. ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ನಿನ್ನೆ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಏನಿದು ಪ್ರಕರಣ?
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕ ಯತ್ನಾಳ್‌ ‘ದಿನೇಶ್‌ ಗುಂಡೂರಾವ್‌ ಮನೆಯಲ್ಲಿಅರ್ಧ ಪಾಕಿಸ್ತಾನ ಇದೆ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ತಬಸುಮ್‌ ಅವರು ಯತ್ನಾಳ್‌ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಜತೆಗೆ, ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಖಾಸಗಿ ದೂರು ದಾಖಲಿಸಿದ್ದರು.

- Advertisement -

Related news

error: Content is protected !!