


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಮಂಗಳೂರು ಉತ್ತರ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿನ್ನಲೆ ಶನಿವಾರ ಮಂಗಳೂರಿನ ಕಾವೂರು ಜಂಕ್ಷನ್ನಲ್ಲಿ ಬಿಜೆಪಿ ನಾಯಕರು ಧರಣಿ ನಡೆಸಿದ್ದರು. ‘ಶಾಸಕರ ಮೇಲೆ ಕಾಂಗ್ರೆಸ್ ಸರ್ಕಾರ ಸುಳ್ಳು ಎಫ್.ಐ.ಆರ್ ದಾಖಲಿಸಿದೆ ಎಂದು ಬಿಜೆಪಿ ಆರೋಪಿಸಿದೆ.
ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ‘ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ ಎಂದು ಶಾಸಕ ಭರತ್ ಶೆಟ್ಟಿ ಹೇಳಿದ್ದರು. ಜೊತೆಗೆ ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಅಂತ ಗೊತ್ತಿಲ್ಲ ಎಂದಿದ್ದರು. ಈ ಹಿನ್ನಲೆ ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ, ವ್ಯಕ್ತಿಯನ್ನ ನಿಂದಿಸಿ, ಶಸ್ತ್ರಾಸ್ತ್ರ ಉಪಯೋಗಿಸಿ ಹೋರಾಟ ಮಾಡೋಣ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಾಲಿಕೆ ಸದಸ್ಯ ಕಾಂಗ್ರೆಸ್ನ ಅನಿಲ್ ಕುಮಾರ್ ದೂರಿನ ಮೇಲೆ BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ನು ಎಫ್.ಐ.ಆರ್ ದಾಖಲು ಬೆನ್ನಲ್ಲೇ ಶಾಸಕ ಭರತ್ ಶೆಟ್ಟಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿದೆ.
ಇತ್ತ ಪ್ರತಿಭಟನಾ ಸಭೆ ಮುಗಿಯುತ್ತಿದ್ದಂತೆ ಕಾವೂರು ಪೊಲೀಸ್ ಠಾಣೆಗೆ ಮೆರವಣಿಗೆ ಮೂಲಕ ಮುತ್ತಿಗೆ ಹಾಕಲು ತೆರಳ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸ್ ಠಾಣೆಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ಪೊಲೀಸರ ತಡೆದಿದ್ದಾರೆ. ಆದರೆ, ಬಿಜೆಪಿ ನಾಯಕರಿಗೆ ಮಾತ್ರ ಪೊಲೀಸ್ ಠಾಣೆ ಬಳಿ ತೆರಳಲು ಅವಕಾಶ ಮಾಡಿಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ‘ಈ ಹೋರಾಟ ಪೊಲೀಸರ ವಿರುದ್ಧ ಅಲ್ಲ, ಅವರ ಹಿಂದಿರುವ ಕಾಣದ ಕೈಗಳ ವಿರುದ್ಧ ಎಂದರು. ‘ಬಿಜೆಪಿ ಶಾಸಕರನ್ನ ಹೆದರಿಸುವ ಕುತಂತ್ರ ಕಾಂಗ್ರೆಸ್ ಮಾಡ್ತಿದೆ. ಮೋದಿ ಹತ್ಯೆ ಮಾಡಬೇಕು ಎಂದವನಿಗೆ ಟಿಕೆಟ್ ನೀಡಿದೆ. ಪಾಕ್ ಜಿಂದಾಬಾದ್ ಎಂದವರ ಪರ ಮಂತ್ರಿಗಳು ಬ್ಯಾಟಿಂಗ್ ಮಾಡಿದ್ದಾರೆ. ಬಾಂಬ್ ಹಾಕಿದವರನ್ನ ಡಿಕೆ ಸೋದರರು ಬ್ರದರ್ಸ್ ಅಂತಾರೆ. ಕಾಂಗ್ರೆಸ್ ಹಿಂದೂ ವಿರೋಧಿ ತನ ಪದೇಪದೆ ತೋರಿಸುತ್ತದೆ. ಜೈ ಶ್ರೀರಾಮ್ ಅಂದ್ರೆ ಚಾಕು ಹಾಕ್ತಾರೆ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಮಾಜಿ ಸಚಿವ ಸುನಿಲ್ ಕುಮಾರ್, ‘ಶಾಸಕ ಭರತ್ ಶೆಟ್ಟಿ ವಿರುದ್ದ ಸುಳ್ಳು ಮೊಕದ್ದಮೆ ದಾಖಲಿಸಲಾಗಿದ್ದು, ಈ ಘಟನೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಸರಕಾರ ನಿರಂತರ ಸುಳ್ಳು ಕೇಸ್ ಹಾಕುತ್ತಿದೆ. ರಾಹುಲ್ ಗಾಂಧಿಯವರು ಯಾವುದೇ ಜನಪರ ಭಾಷಣ ಮಾಡಿದ್ದಲ್ಲ, ಹಿಂದೂಗಳು ಹಿಂಸಾವಾದಿಗಳು ಎಂದು ಭಾಷಣ ಮಾಡಿ ಹಿಂದೂಗಳಿಗೆ ಅಪಮಾನ ಮಾಡಿದ್ದರು. ಅವರ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಶಾಸಕ ಭರತ್ ಶೆಟ್ಟಿ ಮಾತನಾಡಿದ್ದರು ಎಂದರು.
‘ನಾನು ರಾಹುಲ್ ಗಾಂಧಿಗೆ ಕಪಾಳಕ್ಕೆ ಹೊಡೆಯುತ್ತೇನೆ ಎಂದು ಹೇಳಿಲ್ಲ – ಸಂಸತ್ತಿನಲ್ಲಿರುವವರು ಎರಡು ಕೊಟ್ಟಿದ್ರೆ ಒಳ್ಳೆಯದಿತ್ತು’ ,ನಿಮ್ಮ ಕಾರ್ಯಕರ್ತನಾಗಲಿ, ರಾಹುಲ್ ಗಾಂಧಿಯಾಗಲಿ ಸಿದ್ದರಾಮಯ್ಯನಾಗಲಿ ಹಿಂದುತ್ವದ ವಿರುದ್ಧ ಮಾತನಾಡುವವನಿಗೆ ಇದೇ ಟ್ರಿಟ್ ಮೆಂಟ್..!
ಈ ದೇಶದಲ್ಲಿ ಶಾಂತಿ ಸೌಹಾರ್ದತೆ ಇದೆ ಅಂತದಾರೆ ಅದು ಹಿಂದೂಗಳಿಂದಾಗಿ,ಕಲ್ಲಡ್ಕ ಪ್ರಭಾಕರ ಭಟ್ ನ್ನು ಕಡಿಬೇಕು ಎಂದ ರಮಾನಾಥ ರೈ ಈಗ ನನಗೆ ಶಾಂತಿ ಮಂತ್ರ ಹೇಳ್ತಿದ್ದಾರೆ – ಐವನ್ ಡಿಸೋಜಾನಿಗೆ ತಾಕತ್ತಿದ್ದರೆ ಇವನಿಗೆ ಕೇಸ್ ಕೊಡಬಹುದಿತ್ತು – ಇನಾಯತ್ ಆಲಿ ಫಸ್ಟ್ ದುಡ್ಡು ಕೊಟ್ಟಾದ್ರು ಡಿಗ್ರಿ ಮಾಡು ಮತ್ತೇ ಪೋಸ್ಟ್ ಗ್ರ್ಯಾಜುಯೇಶನ್ ಬಗ್ಗೆ ಮಾತನಾಡುವ ಪ್ರತಿಭಟನೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಆಕ್ರೋಶವನ್ನು ಹೊರಹಾಕಿದರು
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿದರು. ಪ್ರತಿಭಟನೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಸುಳ್ಯ ಶಾಸಕ ಭಾಗೀರತಿ ಮುರುಳ್ಯ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಭಾಗವಹಿಸಿದ್ದರು.