- Advertisement -
- Advertisement -
ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಳೆದ ತಿಂಗಳಷ್ಟೇ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದ ಅವರು ರಾಜೀನಾಮೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಮೊದಲಿನಿಂದಲೂ ಲೋಕಸಭೆ ಚುನಾವಣೆಯಲ್ಲಿ ಜೆ.ಪಿ. ನಡ್ಡಾ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ರಾಜ್ಯಸಭೆಗೆ ಆಯ್ಕೆಯಾಗುವುದರೊಂದಿಗೆ ಊಹಾಪೋಹಗಳಿಗೆ ತೆರೆ ಬಿದ್ದಿತ್ತು. ಇದರ ಬೆನ್ನಲ್ಲೇ ರಾಜೀನಾಮೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.
- Advertisement -