Friday, April 26, 2024
spot_imgspot_img
spot_imgspot_img

ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ, ಶಿರಾಡಿ ಘಾಟ್ ದಾರಿಯಾಗಿ ಆಗಮಿಸಿ – ಮಿಥುನ್ ರೈ

- Advertisement -G L Acharya panikkar
- Advertisement -

ಮಂಗಳೂರು, ನ.4 : ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು, ಮಂತ್ರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ – ಶಿರಾಡಿ ಘಾಟ್ ದಾರಿಯಾಗಿ ಆಗಮಿಸುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮನವಿ ಮಾಡಿದ್ದಾರೆ.

ಸಕಲೇಶಪುರ ಭಾಗದಲ್ಲಿ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮಿಥುನ್ ರೈ, ನ.5ರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಬಿಜೆಪಿ ನಾಯಕರು, ಸಕಲೇಶಪುರ – ಶಿರಾಡಿ ಘಾಟ್ ಮುಖಾಂತರ ಆಗಮಿಸಿ. ಅಲ್ಲದೆ, ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ಮಂಗಳೂರಿನಲ್ಲಿ ಟ್ರೆಂಡ್ ಆಗಿರುವ ‘ರೋಡ್ ಚಾಲೆಂಜ್ ” ಹ್ಯಾಶ್‌ಟ್ಯಾಗ್‌ನಲ್ಲಿ ಭಾಗಿಯಾಗಿರಿ ಎಂದು ಹೇಳಿ ರಾಜ್ಯ ಬಿಜೆಪಿ ಸರಕಾರದ ನಾಯಕರನ್ನು ಅಣಕಿಸಿದ್ದಾರೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ, ಗುಂಡ್ಯ, ಸಕಲೇಶಪುರ ಭಾಗದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ‘ರೋಡ್ ಚಾಲೆಂಜ್’ ಎಂಬ ಹ್ಯಾಶ್‌ಟ್ಯಾಗ್‌ನಲ್ಲಿ ಟೀಕೆಗೆ ಗುರಿಯಾಗಿದೆ. ಹೆದ್ದಾರಿ ಸರಿಮಾಡದ ರಾಜ್ಯ ಸರಕಾರದ ನಾಯಕರಿಗೆ ಟ್ಯಾಗ್ ಮಾಡುವ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಈ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ.

- Advertisement -

Related news

error: Content is protected !!