Monday, June 30, 2025
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸದಸ್ಯರಾಗಿ ದೇವಿಪ್ರಸಾದ್‌ ಶೆಟ್ಟಿ ಬೆಂಞಂತ್ತಿಮಾರ್‌ ಗುತ್ತು ಆಯ್ಕೆ

- Advertisement -
- Advertisement -
This image has an empty alt attribute; its file name is knowledge-hub-tution-690x1024.jpeg

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜೆಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರಾಗಿ ದೇವಿಪ್ರಸಾದ್‌ ಶೆಟ್ಟಿ ಬೆಂಞಂತ್ತಿಮಾರ್‌ ಗುತ್ತುರವರು ಆಯ್ಕೆಯಾಗಿದ್ದಾರೆ.

ಬಿಜೆಪಿ ಮಾಣಿ ಶಕ್ತಿಕೇಂದ್ರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್‌ ಕುಂಪಲರವರ ಅನುಮತಿಯಂತೆ ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್‌ರವರು ದೇವಿಪ್ರಸಾದ್‌ ಶೆಟ್ಟಿ ಯವರನ್ನು ಆಯ್ಕೆ ಮಾಡಿದ್ದಾರೆ.

ಮಾಧ್ಯಮದೊಂದಿಗೆ ಮಾತಾನಾಡಿದ ದೇವಿಪ್ರಸಾದ್‌ ಶೆಟ್ಟಿಯವರು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನನಗೆ ಜವಾಬ್ದಾರಿ ನೀಡಿದೆ. ಪಕ್ಷದ ಒಳಿತಿಗಾಗಿ ಜವಾಬ್ದಾರಿಯುತವಾಗಿ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್‌ ಕುಂಪಲ, ಸಂಸದ ಕ್ಯಾಪ್ಟನ್‌ ಬೃಜೇಷ್‌ ಚೌಟ, ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್‌ ಬಂಟ್ವಾಳ ಶಾಸಕ ರಾಜೇಶ್‌ ನ್ಯಾಕ್‌, ಮತ್ತು ಪಕ್ಷದ ಎಲ್ಲಾ ಮುಖಂಡರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ವಿಟ್ಲ ಪ್ರಖಂಡ ಭಜಂಗದಳದ ಮಾಜಿ ಅಧ್ಯಕ್ಷರೂ ಆಗಿರುವ ದೇವಿಪ್ರಸಾದ್‌ ಶೆಟ್ಟಿಯವರು ಈ ಹಿಂದೆ ಬಿಜೆಪಿ ಬಂಟ್ವಾಳ ಮಂಡಲದ ಮಾಧ್ಯಮ ಪ್ರಮುಖ್ ಆಗಿದ್ದರು.

- Advertisement -

Related news

error: Content is protected !!