- Advertisement -
- Advertisement -
ನವದೆಹಲಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಇಂದು ಅಧಿಕಾರ ವಹಿಸಿಕೊಂಡರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ . ಪಿ. ನಡ್ಡಾ ಅವರು ಈ ನೇಮಕಾತಿ ಮಾಡಿದ್ದಾರೆ.
ಅಧಿಕಾರ ವಹಿಸಿಕೊಳ್ಳುವ ಮೊದಲು ಅಂಬೇಡ್ಕರ್ ಪ್ರತಿಮೆಗೆ ತೇಜಸ್ವಿ ಸೂರ್ಯ ಗೌರವ ಸಲ್ಲಿಸಿದರು. ಯುವ ಮೋರ್ಚಾದಲ್ಲಿ ಹಿಂದುಳಿದ ಸಮುದಾಯದ ನಾಯಕತ್ವಕ್ಕೆ ಆದ್ಯತೆ ನೀಡುವುದಾಗಿ ತಿಳಿಸಿದರು.
ಕಳೆದ ವಾರ ಕೊಲ್ಕತ್ತಾದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಯಲ್ಲಿ ತೇಜಸ್ವಿ ಸೂರ್ಯ ಭಾಗವಹಿಸಿದ್ದರು.
- Advertisement -