Saturday, June 28, 2025
spot_imgspot_img
spot_imgspot_img

ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು; ಬಿ.ಕೆ ಹರಿಪ್ರಸಾದ್‌

- Advertisement -
- Advertisement -

ಬೆಂಗಳೂರು: ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ ಆಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎಂದಾದರೆ ಹಾಗೆಯೇ ಆಗಲಿ ಎಂದು ಎಂಎಲ್​ಸಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಯಲ್ಲೇ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಕೂಡ ಆ ಬಗ್ಗೆ ಪ್ರಸ್ತಾಪಿಸಿದ್ದರು.

ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ಹೇಳಿಕೆ ನೀಡಿದ್ದಾರೆ. ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್​​​ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಹೇಳಿಕೆ ನೀಡಿದ್ದಾರೆ.

- Advertisement -

Related news

error: Content is protected !!