ಬಿಜೆಪಿ ಸಂಘಟನಾ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿದರು. ಉಪಹಾರ ನಡೆಸುತ್ತಾ ಸಿಎಂ ಜತೆ ಮಾತುಕತೆ ನಡೆಸಿದ್ದಾರೆ. ಬಿ.ಎಲ್ ಸಂತೋಷ್ ಸಿಎಂ ಮನೆಗೆ ಭೇಟಿ ನೀಡಿದ ವಿಚಾರ ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.
ಇದಲ್ಲದೇ, ವಸತಿ ಸಚಿವ ವಿ.ಸೋಮಣ್ಣ ಕೂಡ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿ.ಎಲ್ ಸಂತೋಷ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪ್ರಸಕ್ತ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಸಂಪುಟ ಪುನಾರಚನೆ ಹಿನ್ನಲೆಯಲ್ಲಿ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿ ಸಚಿವ ಸೋಮಣ್ಣ, ನಾಯಕತ್ವದ ಬದಲಾವಣೆ ವಿಚಾರವೇ ಚರ್ಚೆ ಬಂದಿಲ್ಲ. ಬಿ.ಎಲ್ ಸಂತೋಷ್ ರನ್ನು ಭೇಟಿಯಾಗಿ ಹಲವು ದಿನಗಳಾಗಿತ್ತು. ಹೀಗಾಗಿ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದೆ ಎಂದು ಹೇಳಿದರು.
ಸಿಎಂ ಬಿಎಸ್ ವೈ ಕೂಡ ಟ್ವೀಟ್ ಮಾಡಿದ್ದು, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಆತ್ಮೀಯರೂ ಆಗಿರುವ ಶ್ರೀ ಬಿ.ಎಲ್.ಸಂತೋಷ್ ಅವರನ್ನು ಇಂದು ಮನೆಗೆ ಆಹ್ವಾನಿಸಿ ಹಬ್ಬದ ಶುಭಾಶಯ ಕೋರಲಾಯಿತು. ರಾಜ್ಯದ ಅಭಿವೃದ್ಧಿ, ಪಕ್ಷಸಂಘಟನೆ ಕುರಿತಂತೆ ಮಾತುಕತೆ ನಡೆಸಲಾಯಿತು. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಅರುಣ್ ಕುಮಾರ್ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಆತ್ಮೀಯರೂ ಆಗಿರುವ ಶ್ರೀ ಬಿ.ಎಲ್.ಸಂತೋಷ್ ಅವರನ್ನು ಇಂದು ಮನೆಗೆ ಆಹ್ವಾನಿಸಿ ಹಬ್ಬದ ಶುಭಾಶಯ ಕೋರಲಾಯಿತು. ರಾಜ್ಯದ ಅಭಿವೃದ್ಧಿ, ಪಕ್ಷಸಂಘಟನೆ ಕುರಿತಂತೆ ಮಾತುಕತೆ ನಡೆಸಲಾಯಿತು. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಅರುಣ್ ಕುಮಾರ್ ಉಪಸ್ಥಿತರಿದ್ದರು.@blsanthosh pic.twitter.com/YywVEZVozt
— B.S. Yediyurappa (@BSYBJP) August 22, 2020