Wednesday, May 1, 2024
spot_imgspot_img
spot_imgspot_img

ಡಿವೈಡರ್‌ಗೆ ಢಿಕ್ಕಿ ಹೊಡೆದ ಕಾರು; ಮೂವರು ಮೃತ್ಯು

- Advertisement -G L Acharya panikkar
- Advertisement -

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್’ಗೆ ಢಿಕ್ಕಿ ಹೊಡೆದ ಪರಿಣಾಮ ಐವರು ಇಂಜಿನಿಯರ್’ಗಳ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಆಗಸ್ಟೀನ್ ನಿರೋಷ್, ದಾ ರೆಡ್ಡಿ ಹಾಗೂ ವಿಘ್ನೇಶ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮಿಥುನ್ ಯಾದವ್ ಹಾಗೂ ಶತೃಘ್ನ ಎಂಬವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮೃತರೆಲ್ಲರು ಬೆಂಗಳೂರಿನ ಖಾಸಗಿ ಐಟಿ ಕಂಪನಿಯೊಂದರಲ್ಲಿ ಟೆಕ್ಕಿಗಳಾಗಿದ್ದರು ಎನ್ನಲಾಗಿದೆ. ರಜೆ ಇದ್ದಿದ್ದರಿಂದ ಒಂದು ದಿನದ ಪಿಕ್‌ನಿಕ್ ಗೆ ಎಂದು ಮೈಸೂರು ಟ್ರಿಪ್ ಹೋಗಿದ್ದರು. ಮೈಸೂರಿಗೆ ತೆರಳಿ ವಾಪಸ್‌ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಆಗಸ್ಟೀನ್ ಎಂಬವರು ಕಾರು ಚಲಾಯಿಸುತ್ತಿದ್ದು, ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!