- Advertisement -
- Advertisement -
ಕಾರವಾರ: ಮೀನುಗಾರಿಗೆ ನಡೆಸುತ್ತಿದ್ದ ವೇಳೆಯಲ್ಲಿ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗಡೆಯಾಗುತ್ತಿದ್ದ 8 ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ಉಡುಪಿಯ ಶ್ರೀ ಸೌಪರ್ಣಿಕಾ ಎಂಬ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಕಾರವಾರ ಭಾಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿಯೇ ಬೋಟ್ ತಳಭಾಗದ ಫೈಬರ್ ಒಡೆದು ಹೋಗಿದ್ದು, ಬೋಟ್ ಸಂಪೂರ್ಣವಾಗಿ ಮುಳುಗುವ ಹಂತಕ್ಕೆ ತಲುಪಿತ್ತು. ಈ ವೇಳೆಯಲ್ಲಿ ಬೋಟ್ ನಲ್ಲಿದ್ದ ಮೀನುಗಾರರು ರಕ್ಷಣೆ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರು.
ತಕ್ಷಣ ಸ್ಥಳಕ್ಕೆ ಆಗಮಿಸಿದ ಕರಾವಳಿ ಕಾವಲು ಪಡೆಯ ನಿಶ್ಚಲ್ ಕುಮಾರ್ ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ್ ನ ಅಸಿಸ್ಟೆಂಟ್ ಕಮಾಂಡೆಂಟ್ ಶಶಾಂಕ್ ಕುಮಾರ್ ರವರ ತಂಡ ಮುಳುಗಡೆ ಯಾಗುತ್ತಿದ್ದ ಬೋಟ್ ಹಾಗೂ ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.
- Advertisement -