- Advertisement -
- Advertisement -
ಮುಂಬೈ(ನ.9): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಎನ್ ಸಿ ಬಿ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಅವರಿಗೆ ಮತ್ತೆ ನೋಟಿಸ್ ಜಾರಿ ಮಾಡಿದೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಹಿಂದೆ ಎರಡು ಬಾರಿ ಕರಿಷ್ಮಾ ಪ್ರಕಾಶ್ ಅವರನ್ನು ಎನ್ ಸಿ ಬಿ ವಿಚಾರಣೆಗೆ ಗುರಿಪಡಿಸಿತ್ತು. ನಾಳೆ ನಡೆಯಲಿರುವ ವಿಚಾರಣೆ ಅತ್ಯಂತ ಮಹತ್ವದಾಗಿದೆ. ಕರಿಷ್ಮಾ ಪ್ರಕಾಶ್ ಅವರನ್ನು ಎನ್ ಸಿ ಬಿ ಬಂಧಿಸುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ ಮಾದಕ ದ್ರವ್ಯ ಜಾಲದ ನಂಟಿನ ಆರೋಪದ ಹಿನ್ನೆಲೆಯಲ್ಲಿ ಚಿತ್ರ ನಿರ್ಮಾಪಕ ಫಿರೋಜ್ ನಡಿಯಾಡ್ ವಾಲ ಅವರ ಪತ್ನಿಯನ್ನು ಎನ್ ಸಿ ಬಿ ಬಂಧಿಸಿದೆ. ಅವರ ಮನೆ ಮೇಲೆ ದಾಳಿ ನಡೆಸಿದ ಎನ್ ಸಿ ಬಿ ಮಾದಕ ದ್ರವ್ಯ ಕೂಡ ವಶಪಡಿಸಿಕೊಂಡಿದೆ.
ವಿಚಾರಣೆಗೆ ಹಾಜರಾಗುವಂತೆ ಫಿರೋಜ್ ನಡಿಯಾಡ್ ವಾಲ ಅವರಿಗೆ ಎನ್ ಸಿ ಬಿ ನೋಟಿಸ್ ಜಾರಿ ಮಾಡಿದೆ. ಭಾನುವಾರ ಎನ್ ಸಿ ಬಿ ಮುಂಬೈನ ಐದು ಪ್ರದೇಶಗಳಲ್ಲಿ ದಾಳಿ ನಡೆಸಿತ್ತು.
- Advertisement -