Monday, July 20, 2026
spot_imgspot_img
spot_imgspot_img

ಬಾಲಿವುಡ್‌ ನಟ ರಣವೀರ್‌ ಸಿಂಗ್‌ ನಿಂದ ದೈವಕ್ಕೆ ಅವಮಾನ!-‘ಕಾಂತಾರ ಅಧ್ಯಾಯ 1’ ಚಿತ್ರದ ದೈವ ಕೃತ್ಯವನ್ನು ತಮಾಷೆಯಾಗಿ ಅನುಕರಣೆ- ವ್ಯಾಪಕ ಆಕ್ರೋಶ, ಕ್ಷಮೆಯಾಚನೆಗೆ ಆಗ್ರಹ

- Advertisement -
- Advertisement -

ಮಂಗಳೂರು: ಗೋವಾದಲ್ಲಿ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ‘ಕಾಂತಾರ ಅಧ್ಯಾಯ 1’ ಚಿತ್ರದ ದೈವ ಕೃತ್ಯವನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೆ ಕಾರಣವಾಗಿದ್ದಾರೆ.

‘ಕಾಂತಾರ’ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಹೇಳಿ ರಣವೀರ್ ಟೀಕೆಗೆ ಗುರಿಯಾಗಿದ್ದು, ಅವರು ಕ್ಷಮೆಯಾಚಿಸಬೇಕು ಎಂದು ವ್ಯಾಪಕ ಆಗ್ರಹ ಕೇಳಿ ಬಂದಿದೆ. ಕರಾವಳಿಯ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ತುಳುನಾಡಿನ ದೈವಾರಾಧಕರೂ, ರಣವೀರ್ ಸಿಂಗ್ ವಿರುದ್ಧ KJ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ನಟ ರಿಷಬ್ ಶೆಟ್ಟಿ ಅವರನ್ನು ಶ್ಲಾಘಿಸುತ್ತಾ, “ನಾನು ಥಿಯೇಟರ್‌ನಲ್ಲಿ ‘ಕಾಂತಾರ ಚಾಪ್ಟರ್ 1’ ನೋಡಿದೆ. ನಿಮ್ಮ ಅಭಿನಯ ಅದ್ಭುತವಾಗಿತ್ತು, ವಿಶೇಷವಾಗಿ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು” ಎಂದು ಹೇಳಿ, ಚಿತ್ರದ ಕೈಮ್ಯಾಕ್ಸ್ ದೃಶ್ಯವನ್ನು ರಣವೀರ್ ಸಿಂಗ್ ಅನುಕರಣೆ ಮಾಡಿದ್ದಾರೆ. ಆದರೆ ಹಾಗೆ ಮಾಡುವಾಗ ತಮಾಷೆಯ ರೀತಿಯಲ್ಲಿ ರಣವೀರ್ ಸಿಂಗ್ ಅನುಕರಣೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಅನುಕರಣೆ ವೇಳೆ, ಕಿರುಚುತ್ತಾ ನಾಲಗೆ ಹೊರಗೆ ಚಾಚಿ, ಕೆಟ್ಟದಾಗಿ ನಟಿಸಿ ತೋರಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಾದದ ಕುರಿತು ರಣವೀರ್ ಸಿಂಗ್ ಅಥವಾ ಅವರ ತಂಡದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಗೋವಾದಲ್ಲಿ ನಡೆದ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ರಿಷಬ್ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

- Advertisement -

Related news

error: Content is protected !!