Friday, May 17, 2024
spot_imgspot_img
spot_imgspot_img

ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಕಿಡಿಗೇಡಿಗಳು ಬಾಂಬ್ ಹಾಕುವ ಬೆದರಿಕೆ

- Advertisement -G L Acharya panikkar
- Advertisement -

ಚೆನ್ನೈ: ಅಕ್ಟೋಬರ್ .14: ತಮಿಳು ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಕಿಡಿಗೇಡಿಗಳು ಬಾಂಬ್ ಹಾಕುವ ಬೆದರಿಕೆ ಒಡ್ಡಿದ್ದಾರೆ.

ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಇಬ್ಬರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಮನೆಯಲ್ಲಿ ಸಂಶಯಿತ ವಸ್ತು ಯಾವುದೂ ಸಿಗಲಿಲ್ಲ. ಹೀಗಾಗಿ ಇದೊಂದು ಸುಳ್ಳು ಬೆದರಿಕೆ ಆಗಿರಬಹುದು ಎನ್ನಲಾಗುತ್ತಿದೆ.


ನಟ ಧನುಷ್ ಅವರ ಚೆನ್ನೈನಲ್ಲಿರುವ ಅಭಿರಾಮಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು, ಇಬ್ಬರ ನಿವಾಸಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಕರೆ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಕಾರ್ಯಾಚರಣೆ ನಡೆಸಿದ ಬಳಿಕ ಎರಡೂ ಕರೆಗಳನ್ನು ಒಬ್ಬನೇ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ವ್ಯಕ್ತಿಯ ಬಗ್ಗೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆತನ ಬಗ್ಗೆ ಮಾಹಿತಿ ಗೊತ್ತಾಗಿದ್ದು ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ಎರಡು ತಿಂಗಳಿಂದ ಕಾಲಿವುಡ್ ನಟರಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿದೆ. ಈ ಮೊದಲು ರಜನಿಕಾಂತ್, ವಿಜಯ್ ಮತ್ತು ಸೂರ್ಯ ಅವರಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದರೆ ಈ ಕರೆಗಳನ್ನು ಮಾನಸಿಕ ಅಸ್ವಸ್ಥ ವ್ಯಕ್ತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಜುಲೈ 18ರಂದು ನಟ ಅಜಿತ್ ಮನೆಯಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು. ಬಳಿಕ ಬಾಂಬ್ ಸ್ಕ್ವಾಡ್ ಅಧಿಕಾರಿಗಳು ಇಡೀ ಮನೆಯನ್ನು ಜಾಲಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಇದು ಸುಳ್ಳು ಕರೆ ಎಂದಿದ್ದರು.

- Advertisement -

Related news

error: Content is protected !!