Tuesday, May 7, 2024
spot_imgspot_img
spot_imgspot_img

ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಸ್ಫೋಟ; ಒರ್ವ ಮೃತ್ಯು

- Advertisement -G L Acharya panikkar
- Advertisement -

ಕೇರಳದ ಎರ್ನಾಕುಲಂನ ಕಲಮಶ್ಯೆರಿಯಲ್ಲಿ‌ ಬಾಂಬ್ ಸ್ಫೋಟವೊಂದು ನಡೆದಿದ್ದು, ಓರ್ವ ದುರ್ಮರಣಕ್ಕೀಡಾಗಿದ್ದಾರೆ.

ಮೂರು ಪ್ರಬಲ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ.

ಭಾನುವಾರದ ಪ್ರೇಯರ್ ಗಾಗಿ ಸುಮಾರು 2,500 ಮಂದಿ ಸೇರಿದ್ದರು. ಈ ವೇಳೆ ಪ್ರೇಯರ್ ಹಾಲ್ ನಲ್ಲಿ ಭಾರೀ ಸ್ಪೋಟಗೊಂಡಿದೆ. ಘಟನೆಯಿಂದ ಗಾಬರಿಗೊಂಡು ಜನ ದಿಕ್ಕಾಪಾಲಾಗಿದ್ದರು. ಪ್ರಾರ್ಥನಾ ಮಂದಿರವನ್ನೇ ಗುರಿಯಾಗಿಸಿಕೊಂಡು ಹಾಗೂ ಸ್ಫೋಟದ ಹಿಂದೆ ಭಯೋತ್ಪಾದಕ ಕೃತ್ಯ ಶಂಕೆ ಇದೆ.

ಈ ಸಂಬಂಧ ಕೇರಳ ಮುಖ್ಯಮಂತ್ರಿ ಪ್ರತಿಕ್ರಿಯಿಸಿ, ಕಲಮಶ್ಯೆರಿಯಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದ ವೇಳೆ ಸಂಭವಿಸಿದ ಸ್ಫೋಟ ದುರದೃಷ್ಟಕರ. ಸ್ಫೋಟದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಎಲ್ಲ ಅಂಶಗಳನ್ನು ಪರಿಶೀಲಿಸಲಾಗುವುದು ಎಂದಿದ್ದಾರೆ.

- Advertisement -

Related news

error: Content is protected !!