- Advertisement -
- Advertisement -
ಬಂಟ್ವಾಳ: ಬೋರುವೆಲ್ ಕೊರೆಯುವ ಘನಗಾತ್ರದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಚಾಲಕ ತಂದೆ ಮೃತಪಟ್ಟು, ಸಹಸವಾರ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅಲ್ಲಿಪಾದೆ ಎಂಬಲ್ಲಿ ನಡೆದಿದೆ.
ನಾವೂರ ಸಮೀಪದ ಪರಾರಿ ಜಯಪೂಜಾರಿ ( 55) ಮೃತಪಟ್ಟ ವ್ಯಕ್ತಿಯಾಗಿದ್ದು,ಇವರ ಮಗ ರಕ್ಷಿತ್ ಸಹಸವಾರನಾಗಿದ್ದು,ಈತನಿಗೆ ಗಂಭೀರ ಗಾಯವಾಗಿದ್ದು,ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -