- Advertisement -
- Advertisement -
ಚಿಕ್ಕಮಗಳೂರು: ಇಂದು ಹಸೆಮಣೆ ಏರಬೇಕಿದ್ದ ಯುವಕ ಕೊರೊನಾ ಸೋಂಕಿಗೆ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ.

ಸೋಂಕಿಗೆ ಬಲಿಯಾದ ಯುವಕ 32 ವರ್ಷದ ಪೃಥ್ವಿರಾಜ್ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಹತ್ತು ದಿನಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಯುವಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸಂಭ್ರಮ ನೆಲೆಸಬೇಕಿದ್ದ ಮನೆಯಲ್ಲೀಗ ಸೂತಕದ ಛಾಯೆ ಉಂಟಾಗಿದೆ.


- Advertisement -








