Friday, May 3, 2024
spot_imgspot_img
spot_imgspot_img

ಮೆದುಳು ಜ್ವರದಿಂದ ಬಾಲಕ ಮೃತ್ಯು..!

- Advertisement -G L Acharya panikkar
- Advertisement -

ಬಾಲಕನೋರ್ವ ಮೆದುಳು ಜ್ವರದಿಂದ ಮೃತಪಟ್ಟ ಘಟನೆ ವಿಜಯಪುರ ನಗರದ ಗೋಳಗುಮ್ಮಟ ಸಮೀಪ ನಡೆದಿದೆ.

ಮೃತಪಟ್ಟ ಬಾಲಕ ಗೋಳಗುಮ್ಮಟ ಬಡವಾಣೆ ನಿವಾಸಿ ರಜಿತ್ ಮಿಥುನ್ ಅಳ್ಳಿಮೋರೆ (10) ಎಂದು ಗುರುತಿಸಲಾಗಿದೆ.

ರಜಿತ್ ಕಳೆದ ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ. ಹಾಗಾಗಿ ಆತನನ್ನು ಪೋಷಕರು ಚಿಕಿತ್ಸೆಗಾಗಿ ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಜ್ವರ ನೆತ್ತಿಗೆ ಏರಿ ಮೆದುಳಲ್ಲಿ ಕಾಣಿಸಿಕೊಂಡ ಬಾವು ಬಂದಿತ್ತು. ಕಾರಣ ಚಿಕಿತ್ಸೆ ಫಲಿಸದೆ ಬಾಲಕನು ಇಂದು ಮೃತಪಟ್ಟಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲೇರಿದೆ.

- Advertisement -

Related news

error: Content is protected !!