Monday, April 29, 2024
spot_imgspot_img
spot_imgspot_img

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ.

ವಿದ್ಯುತ್ ತಂತಿ ತಗುಲಿ ಶ್ರೇಯಸ್ ಶಿನ್ನೂರ (16 ವರ್ಷ) ಮೃತಪಟ್ಟಿದ್ದಾನೆ. ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಮನೆ ಬಳಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು,. ಅಲ್ಲಿ ಆಟ ಆಡುತ್ತಿದ್ದರು, ಕ್ಯಾಚ್ ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ ತಗುಲಿ ಶ್ರೇಯಸ್ ಅಸ್ವಸ್ಥಗೊಂಡಿದ್ದ. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಶ್ರೇಯಸ್ ಜೊತೆಗಿದ್ದ ಗೆಳೆಯನಿಗೂ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

- Advertisement -

Related news

error: Content is protected !!