- Advertisement -
- Advertisement -
ಕಾಸರಗೋಡು: ಬಾಲಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದನ್ನು ನೋಡಿದ ನೆರೆಮನೆಯ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಬಂಗಳಂ ಹಾಲಿನ ಸೊಸೈಟಿ ಬಳಿಯ ಜಮಾ ಅತ್ ಕ್ವಾರ್ಟರ್ಸ್ನಲ್ಲಿ ವಾಸವಾಗಿರುವ ಸೆಬಾಸ್ಟಿನ್ ಎಂಬುವರ ಪುತ್ರ ಅಲ್ವಿನ್ ಸೆಬಾಸ್ಟಿನ್ (16) ಮನೆ ಪಕ್ಕದಲ್ಲೇ ಇರುವ ಕಂದಕ್ಕೆ ಈಜಾಡಲು ಇಳಿದಿದ್ದರು. ಈ ವೇಳೆ ಅವರ ತಾಯಿ ಸೇರಿದಂತೆ ಹಲವರು ಪಕ್ಕದಲ್ಲೇ ಇದ್ದರು. ನೀರಿಗಿಳಿದ ಕೆಲ ಹೊತ್ತಿನಲ್ಲೇ ಆಯತಪ್ಪಿದ ಆಲ್ವಿನ್ ಮುಳುಗಿ ಕಾಣೆಯಾಗಿದ್ದರು. ಅಗ್ನಿಶಾಮಕ ಮತ್ತು ಸ್ಥಳೀಯರ ಸಹಕಾರದಿಂದ ಶವ ಮೇಲೆತ್ತಲಾಯಿತು.
ಅಲ್ಲೇ ಇದ್ದ ನೆರೆಮನೆಯ ವಿಲಾಸಿನಿ (65) ಅವರು ಅಶ್ವಿನ್ ಅವರ ಶವ ನೋಡಿದ ಕೂಡಲೇ ಕುಸಿದು ಬಿದ್ದರು. ತಕ್ಷಣ ಅವರನ್ನು ನೀಲೇಶ್ವರ ಸಹಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ನೀಲೇಶ್ವರ ಪೊಲೀಸರು ಮಹಜರು ನಡೆಸಿದರು.
- Advertisement -