- Advertisement -
- Advertisement -
ಬೆಳ್ತಂಗಡಿ: ಉಜಿರೆ ರಥಬೀದಿ ಸಮೀಪ ಗುರುವಾರ ಸಂಜೆವೇಳೆ ಆಟವಾಡುತ್ತಿದ್ದ 8 ವರ್ಷದ ಬಾಲಕನನ್ನು ಕಾರಿನಲ್ಲಿ ಬಂದಿದ್ದ ನಾಲ್ವರು ಅಪಹರಿಸಿದ್ದಾರೆ ಎಂಬ ಸುದ್ದಿ ಜನರನ್ನು ಬೆಚ್ಚಿಬೀಳಿಸಿದೆ. ಇದೀಗ ಅಪಹರಣಕಾರರು 17 ಕೋಟಿ ರೂ. ನೀಡುವಂತೆ ಬೇಡಿಕೆಯನ್ನು ಇರಿಸಿದ್ದಾರೆ.
ಈ ಕುರಿತು ಅಪಹರಣಕ್ಕೀಡಾದ ಬಾಲಕನ ಅಜ್ಜ ಎ.ಕೆ. ಶಿವನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವನ್ ಅವರು ಸಂಜೆ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಮೊಮ್ಮಗನನ್ನು ಬಿಳಿ ಬಣ್ಣದ ಇಂಡಿಕಾ ಕಾರಿನಲ್ಲಿ ಅಪಹರಿಸಿದ್ದನ್ನು ನೋಡಿದ್ದಾರೆ. ಶಿವನ್ ಅವರು ಕಾರನ್ನು ತಡೆಯಲು ಪ್ರಯತ್ನಿಸಿದರಾದರೂ ದುಷ್ಕರ್ಮಿಗಳು ಪರಾರಿಯಾಗಲು ಯಶಸ್ವಿಯಾಗಿದ್ದಾರೆ. ಬಳಿಕ ದುಷ್ಕರ್ಮಿಗಳು ಬಾಲಕನ ತಾಯಿ ಗೆ ಪೋನ್ ಮಾಡಿ ಮಗನನ್ನು ಬಿಡಿಸಲು 17 ಕೋಟಿ ರೂ ಬೇಡಿಕೆ ಇಟ್ಟಿದ್ದಾರೆ.
- Advertisement -