Sunday, May 5, 2024
spot_imgspot_img
spot_imgspot_img

ಕೆಎಸ್​ಆರ್​ಟಿಸಿ ಬಸ್​ ಮೇಲೆ ಮದ್ಯದ ಬಾಟಲಿ ಎಸೆತ ; ಪ್ರಶ್ನಿಸಿದ್ದಕ್ಕೆ ಚಾಲಕನ ಮೇಲೆ ಯುವಕರ ಹಲ್ಲೆ

- Advertisement -G L Acharya panikkar
- Advertisement -

ಮದ್ಯ ಸೇವನೆ ಮಾಡಿದ ಯುವಕರು ಬಾಟಲಿಯನ್ನು ಕೆಎಸ್​ಆರ್​ಟಿಸಿ ಬಸ್ ಮೇಲೆ ಎಸೆದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನಲ್ಲಿ ನಡೆದಿದೆ. ಪ್ರಶ್ನಿಸಿದ ಬಸ್ ಚಾಲಕನ ಮೇಲೂ ಯುವಕರು ಹಲ್ಲೆ ನಡೆಸಿದ್ದಾರೆ.
ನಿನ್ನೆ ಸಂಜೆ ನಡೆದಿದ್ದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದು ಕಾರು ಚಲಾಯಿಸುತ್ತಿದ್ದ ನಾಲ್ವರು ಯುವಕರು ‌ಹೋರಿತಿಮ್ಮನಹಳ್ಳಿ ಗೇಟ್ ಬಳಿ ಕೆಎಸ್​ಆರ್​ಟಿಸಿ ಬಸ್ ಮೇಲೆ ಬಾಟಲ್ ಎಸೆದಿದ್ದಾರೆ. ಪರಿಣಾಮ ಬಸ್ ಮುಂಭಾಗದ ಗಾಜಿಗೆ ಹಾನಿಯಾಗಿದೆ. ಇದನ್ನು ಪ್ರಶ್ನಿಸಿದ ಬಸ್ ಚಾಲಕ ಸತೀಶ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದ್ದು, ಬೀರೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಿನ್ನೆ ಸಂಜೆ ನಡೆದಿದ್ದ ಘಟನೆಯ ದೃಶ್ಯ ಮೊಬೈಲ್​​​ನಲ್ಲಿ ಸೆರೆ ಹಿಡಿಯಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಕಿರಣ್​, ಸತೀಶ್​​, ಸಚಿನ್​, ಸುಪ್ರೀತ್ ಎಂಬವರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!