- Advertisement -
- Advertisement -
ಕಡಬ: ಬೆಳ್ಳಂಬೆಳಗ್ಗೆ ಆನೆ ದಾಳಿಗೆ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ರೆಂಜಿಲಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ರೆಂಜಿಲಾಡಿ ಪ್ರದೇಶದ ರಂಜಿತಾ(21) ಹಾಗೂ ರಮೇಶ್ ರೈ ನೈಲ ಎಂದು ಗುರುತಿಸಲಾಗಿದೆ.
ಮೃತ ಯುವತಿ ರಂಜಿತಾ ರೇಂಜಿಲಾಡಿ ಹಾಲು ಖರೀದಿ ಕೇಂದ್ರದ ಉದ್ಯೋಗಿಯಾಗಿದ್ದು, ಎಂದಿನಂತೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಈ ವೇಳೆ ಯುವತಿ ಬೊಬ್ಬೆ ಹೊಡೆಯುವುದನ್ನು ಕೇಳಿ ರಕ್ಷಣೆಗೆ ಧಾವಿಸಿದ ರಮೇಶ್ ರೈ ಮೇಲೂ ಕಾಡನೆ ದಾಳಿ ನಡೆಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
- Advertisement -