- Advertisement -
- Advertisement -
ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ಅವರು ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ವಿಷಯ ತಿಳಿದು ಬಿಎಸ್ ವೈ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ರವಿ ಆಲಿಯಾಸ್ ರಾಜಾಹುಲಿ ಎನ್ನಲಾಗಿದೆ. ಈತ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದನು. ಬಿಎಸ್ ಯಡಿಯೂರಪ್ಪ ನಿನ್ನೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿರುವ ವಿಡಿಯೋವನ್ನು ನೋಡಿ ಇದರಿಂದ ಮನನೊಂದು ರವಿ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -