ಕಳೆದ ಒಂದು ವಾರದಿಂದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗುವುದಿಲ್ಲವೆಂಬ ಸುದ್ದಿ ಹಬ್ಬಿದ್ದು, ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ದಕ್ಷಿಣ ಕನ್ನಡದಿಂದ ಎಂಪಿ ಟಿಕೆಟ್ ಫೈನಲ್ ಆಗಿದೆ ಎಂಬ ಬಗ್ಗೆ ಸುದ್ದಿಯಾಗಿತ್ತು. ಬಿ ಎಸ್ ವೈ ಅವರು ಟಿಕೆಟ್ ಕೈ ತಪ್ಪುವರ ಬೆಂಬಲಕ್ಕೆ ನಿಂತಿದ್ದಾರೆ
ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲು ಹೆಸರು ಶಿಫಾರಸ್ಸು ಮಾಡಿ ಬಿಜೆಪಿ ಹೈ ಕಮಾಂಡ್ ಗೆ ತಾನು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ಸ್ಪಷ್ಟವಾಗಿ ಸೂಚಿಸಿದ್ದಾರೆ. ನಾಳೆ ಮಾರ್ಚ್ 10 ರಂದು ದೆಹಲಿಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಮೋದಿ, ನಡ್ಡಾ, ಅಮಿತ್ ಶಾ ಭಾಗವಹಿಸಲಿದ್ದಾರೆ. ಕರ್ನಾಟಕದಿಂದ ಬಿ ಎಸ್ ವೈ ಅವರು ಪಾಲ್ಗೊಳ್ಳಲಿದ್ದಾರೆ.
ನಾಳೆ ಸಂಜೆಯೊಳಗೆ ಬಿಜೆಪಿ ಟಿಕೆಟ್ ಹಂಚಿಕೆ ಪ್ರಕ್ರಿಯೆ ಫೈನಲ್ ಆಗಲಿದೆ. ಕರ್ನಾಟಕದಲ್ಲಿ ಬಿಎಸ್ ವೈ ಸೂಚಿಸಿದ ಅಭ್ಯರ್ಥಿಗಳಿಗೆ ಟಿಕೆಟ್ ನೂರಕ್ಕೆ ನೂರರಷ್ಟು ಗ್ಯಾರಂಟಿಯಾಗಿದ್ದು, ಬಿ. ಎಲ್. ಸಂತೋಷ್ರವರು ಕಟೀಲ್ ಪರವಿರುವುದ್ದರಿಂದ ನಳಿನ್ ಕುಮಾರ್ ಕಟೀಲು ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತ 4 ನೇ ಬಾರಿಗೆ ಬಿಜೆಪಿಯಿಂದ ಎಂಪಿ ಟಿಕೆಟ್ ಪಡೆದು ಸ್ಪರ್ಧಿಸುವುದು ಸ್ಪಷ್ಟ ಹಾಗೂ ನೂರಕ್ಕೆ ನೂರರಷ್ಟು ಸತ್ಯವೆಂದು ವರದಿಯಾಗಿದೆ.
ವಿವಾದ ರಹಿತ, ನಿಷ್ಕಲ್ಮಶ ಮನಸ್ಸಿನ ನೇರ ನಡೆ ನುಡಿಯ ನಿಷ್ಕಳಂಕ ನಾಯಕರಾಗಿರುವ ಕಟೀಲ್ ಅವರು ಯಾವುದೇ ಹಗರಣವಿಲ್ಲದ, ಭ್ರಷ್ಟಾಚಾರವಿಲ್ಲದ ಜನಪರ, ಜನ ಮೆಚ್ಚಿದ ನಾಯಕರಾಗಿದ್ದಾರೆ. ಕಟೀಲ್ರವರು ಈ ಸಲ ಸ್ಪರ್ಧಿಸಿದಲ್ಲಿ ಮೂರು ಲಕ್ಷ ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಪ್ರಚಂಡ ಜಯಭೇರಿ ಬಾರಿಸುವುದು ಗ್ಯಾರಂಟಿ ಎಂಬ ಸಮೀಕ್ಷೆ ವ್ಯಕ್ತವಾಗಿದೆ.