


ಬಾಬುಸಾಬ್ಪಾಳ್ಯದಲ್ಲಿ ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ 8 ಮಂದಿ ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಭಾರೀ ಮಳೆಗೆ ಕಾರಣಕ್ಕೆ ಮಂಗಳವಾರ ಮಧ್ಯಾಹ್ನ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಬುಡಮೇಲಾಗಿ ಬಿದ್ದಿತು. ಕಟ್ಟಡ ನಿರ್ಮಾಣದಲ್ಲಿ ತೊಡಗಿದ್ದ ಹಲವಾರು ಕಾರ್ಮಿಕರು ಅದರೊಳಗೆ ಸಿಲುಕಿಕೊಂಡಿದ್ದರು. ಅವರ ಪೈಕಿ 8 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಉಳಿದವರ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಈ ನಡುವೆ ಕಟ್ಟಡ ಮಾಲೀಕರಾದ ಮುನಿರೆಡ್ಡಿ, ಪುತ್ರ ಭುವನ್ ಹಾಗೂ ಗುತ್ತಿಗೆದಾರ ಮುನಿಯಪ್ಪ ಎನ್ನುವವರನ್ನ ಪೊಲೀಸರು ಬಂಧಿಸಿದ್ದಾರೆ.
ಕಾರ್ಯಚರಣೆ ಮುಂದುವರಿದಿದ್ದು, 15 ಗಂಟೆ ಅವಶೇಷಗಳಡಿ ಸಿಲುಕಿಯೂ ಪ್ರಾಣಾಪಾಯದಿಂದ ಪಾರಾದ ಕಾರ್ಮಿಕ ಆಜಾಜ್ ಪಾಶಾ ಸೇರಿ ಒಟ್ಟು 14 ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಮೊಟೋ ಕೇಸ್ ದಾಖಲಿಸಲು ತಿಳಿಸಿದ್ದಾರೆ. ಈ ಬೆನ್ನಲ್ಲೇ ಎಇಇ ವಿನಯ್ ಸಸ್ಪೆಂಡ್ ಆಗಿದ್ದಾರೆ. ಹಾಗೂ, ಬಿಬಿಎಂಪಿ 3 ಬಾರಿ ನೊಟೀಸ್ ನೀಡಿ ಸುಮ್ಮನಾಗಿತ್ತು. ಈ ಮಧ್ಯೆ, ಕಟ್ಟಡ ನಿರ್ಮಿಸಿದ ಮಾಲಿಕ ಭುವನ್ರೆಡ್ಡಿ,ಪುತ್ರ, ಭುವನ್ ಗುತ್ತಿಗೆದಾರ ಮುನಿಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ