Friday, May 17, 2024
spot_imgspot_img
spot_imgspot_img

ಸುರತ್ಕಲ್ : ಖಾಸಗಿ ಬಸ್‌ – ಬೈಕ್ ಗೆ ಡಿಕ್ಕಿ : ಇಬ್ಬರು ಯುವಕರು ಗಂಭೀರ

- Advertisement -G L Acharya panikkar
- Advertisement -

ಸುರತ್ಕಲ್ : ಖಾಸಗಿ ಎಕ್ಸ್ ಪ್ರೆಸ್ ಬಸ್ಸಿನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಬೆಟ್ಟು ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಹಳೆಯಂಗಡಿ ಇಂದಿರಾ ನಗರ ನಿವಾಸಿ ಮುಹಮ್ಮದ್ ಸಾಹಿಲ್ ಮತ್ತು ಪಕ್ಷಿಕೆರೆ ಹೊಸಕಾಡು ನಿವಾಸಿ ಅರಾಫತ್ ಎಂದು ತಿಳಿದು ಬಂದಿದೆ.

ಸುರತ್ಕಲ್ ಹೊಸಬೆಟ್ಟು ಎಂಬಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ರಸ್ತೆ ಬದಿ ಬೈಕ್‌ ನೊಂದಿಗೆ ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಎಕ್ಸ್ ಪ್ರೆಸ್ ಬಸ್ಸಿನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾವಣೆಯೇ ಅಪಘಾತಕ್ಕೆ ಕಾರಣವಾಗಿದೆ
ಇದೇ ಸಂಸ್ಥೆಗೆ ಸೇರಿದ ಬಸ್ಸಿನ ಚಾಲಕ ನಿರ್ವಾಹಕ ಇತ್ತೀಚಿಗೆ ಹೊಸಬೆಟ್ಟು ಸಮೀಪ ಬೈಕ್‌ ಸವಾರರ ಜೊತೆಗೆ ಹೊಡೆದಾಟಕ್ಕಿಳಿದಿದ್ದು ವೈರಲ್ ಆಗಿತ್ತು. ಘಟನೆ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!