Friday, May 17, 2024
spot_imgspot_img
spot_imgspot_img

ಬಸ್ ಹಾಗೂ ಟಾಟಾ ಸುಮೋ ಢಿಕ್ಕಿ; 7 ಮಂದಿ ಮೃತ್ಯು

- Advertisement -G L Acharya panikkar
- Advertisement -

ಅಣ್ಣಾಮಲೈಯರ್‌ ದೇವಾಲಯದಲ್ಲಿ ದರ್ಶನ ಮುಗಿಸಿ ಹೊರಟಿದ್ದ ಭಕ್ತರ ಟಾಟಾ ಸುಮೋ ಅಪಘಾತಕ್ಕೀಡಾಗಿದ್ದು ಸ್ಥಳದಲ್ಲೇ 7 ಮಂದಿ ಮೃತಪಟ್ಟ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ.

ಮೃತರೆಲ್ಲರೂ ಅಸ್ಸಾಂ ಮೂಲದವರು ಎಂದು ತಿಳಿದು ಬಂದಿದೆ. ಧರ್ಮಪುರಿಯಿಂದ ತಿರುವಣ್ಣಾಮಲೈಗೆ ತೆರಳುತ್ತಿದ್ದ ಸರ್ಕಾರಿ ಬಸ್‌ ಚೆಂಗಾಮ್‌ನ ಪಕ್ಕಿರಿಪಾಲಯಂ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಭಕ್ತರ ಟಾಟಾ ಸುಮೋ ಮಧ್ಯೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಒಟ್ಟೂ 10 ಮಂದಿ ಪ್ರಯಾಣಿಸುತ್ತಿದ್ದು ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಘಟನೆಯಲ್ಲಿ ಬಸ್‌ ಹಾಗೂ ಕಾರಿನಲ್ಲಿದ್ದ ಒಟ್ಟೂ 14 ಮಂದಿ ಗಾಯಗೊಂಡಿದ್ದಾರೆ.

ಅಪಘಾತ ಸ್ಥಳಕ್ಕೆ ಆಗಮಿಸಿದ ಪೊಲೀಸ್‌ ಹಾಗೂ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡವರನ್ನು ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆ ಹಾಗೂ ಚೆಂಗಾಮ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಅಸ್ಸಾಂ ಮೂಲದವರಾಗಿದ್ದು ಬೆಂಗಳೂರಿನಲ್ಲಿ ಉದ್ಯೋಗ ಮಾಡಿಕೊಂಡಿರುವವರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!