ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ.
ಮೃತರನ್ನು ಕಾರಿನಲ್ಲಿದ್ದ ಮಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ಕಿನ್ನಿಕಂಬಳದ ರಿಕ್ಷಾ ಚಾಲಕ ರಾಮಕೃಷ್ಣರಾವ್ ಬಾಬುರಾವ್ (71), ಪತ್ನಿ ವಿದ್ಯಾಲಕ್ಷ್ಮಿ(67) ಪುಷ್ಪಾ ಮೋಹನ್ ರಾವ್ (62), ಇನ್ಪೋಸಿಸ್ ಇಂಜಿನಿಯರ್ ಸುಹಾಸ್ ಗಣೇಶ್ ರಾವ್ (30) ಮತ್ತು ಚಾಲಕ ಚೆನ್ನೈ ಮೂಲದ ಅರವಿಂದ್ (45) ಎಂದು ಗುರುತಿಸಲಾಗಿದೆ.
ಕೆಎಸ್ಆರ್ ಟಿಸಿ ಬಸ್ ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದು, ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಕೂಡ ಸಣ್ಣಪುಟ್ಟ ಗಾಯಾಗಳಾಗಿವೆ. ಶಿರಸಿ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಸಮಾಂಭಕ್ಕೆ ವರನ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.