Thursday, May 9, 2024
spot_imgspot_img
spot_imgspot_img

ಓವರ್‌ಟೇಕ್ ಭರದಲ್ಲಿ ಮರಕ್ಕೆ ಬಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -

ಓವರ್‌ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯ ಪಾತಪಾಳ್ಯ ದಲ್ಲಿ ನಡೆದಿದೆ.

ಬಸ್ ಚೇಳೂರು ಚಾಕವೇಲು ಪಾತಪಾಳ್ಯ ಮೂಲಕ ಬಾಗೇಪಲ್ಲಿಗೆ ಬರುತ್ತಿತ್ತು. ಈ ವೇಳೆ ಚಾಲಕ ‌ಓವರ್‌ಟೇಕ್ ಮಾಡುವ ವೇಳೆ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಹಲವು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಿಂತಾಮಣಿ ಹಾಗೂ ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಅಪಘಾತಕ್ಕೊಳಗಾದ ಬಸ್‍ನ್ನು ಜೆಸಿಬಿ ಮೂಲಕ ತೆರವು ಮಾಡಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!