Saturday, June 28, 2025
spot_imgspot_img
spot_imgspot_img

ಎಕ್ಸ್‌ಪ್ರೆಸ್‌ ವೇನಲ್ಲಿ ಬಸ್‌ ಚಾಲಕನ ಹುಚ್ಚಾಟ; ಇಬ್ಬರು ಅರೆಸ್ಟ್..!

- Advertisement -
- Advertisement -

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪರಿಣಾಮ, ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಿಜಿಪಿ ಅಲೋಕ್ ಕುಮಾರ್ ರನ್ನು ಟ್ಯಾಗ್ ಮಾಡಿ ತನ್ನ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಪೋಲೀಸರು ಕಾರ್ಯಾಚರಣೆ ನಡೆಸಿ ಚಾಲಕ ಪ್ರಶಾಂತ್ ಹಾಗೂ ಸಹ ಚಾಲಕ ನೀಲಪ್ಪನನ್ನು ಬಂಧಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಆರೋಪದಡಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!