Monday, April 29, 2024
spot_imgspot_img
spot_imgspot_img

ಸರ್ಕಾರಿ ಬಸ್ ಮತ್ತು ಸ್ಕೂಟರ್​ ನಡುವೆ ಅಪಘಾತ; ಮಹಿಳೆ ಮೃತ್ಯು…!

- Advertisement -G L Acharya panikkar
- Advertisement -

ಸರ್ಕಾರಿ ಬಸ್ ಮತ್ತು ಸ್ಕೂಟರ್​ ನಡುವೆ ಅಪಘಾತ ಸಂಭವಿಸಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕೊಡಗಿನ ರಾಷ್ಟ್ರೀಯ ಹೆದ್ದಾರಿ 275ರ ಗುಡ್ಡೆಹೊಸೂರು ಬಳಿ ನಡೆದಿದೆ. ಸಿದ್ದಾಪುರ ಗ್ರಾಮದ ಲಲಿತಾ (53) ಮೃತಪಟ್ಟಿದ್ದು, ಸ್ಕೂಟರ್​ ಚಲಾಯಿಸುತ್ತಿದ್ದ ಸಿಂಚನಾ ಎಂಬ ಯುವತಿ ಸ್ಥಿತಿ ಗಂಭೀರವಾಗಿದೆ.

ಕೆಎಸ್ಆರ್‌ಟಿಸಿ ಬಸ್ ಮಡಿಕೇರಿಯಿಂದ ಮೈಸೂರಿಗೆ ಬರುತ್ತಿತ್ತು. ಅತ್ತೂರು ಕಡೆಯಿಂದ ಗುಡ್ಡೆಹೊಸೂರು ಕಡೆಗೆ ಬರುತ್ತಿದ್ದ ಸ್ಕೂಟಿ ಚಲಾಯಿಸಿಕೊಂಡು ಇಬ್ಬರು ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೃತ ಮಹಿಳೆ ಪರ್ಪಲ್ ಪಾಮ್ ರೆಸಾರ್ಟ್ ಸಿಬ್ಬಂದಿ ಎಂದು ತಿಳಿದುಬಂದಿದೆ.

ಇನ್ನು ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕುಶಾಲನಗರ ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!