- Advertisement -
- Advertisement -
ಸರ್ಕಾರಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕೊಡಗಿನ ರಾಷ್ಟ್ರೀಯ ಹೆದ್ದಾರಿ 275ರ ಗುಡ್ಡೆಹೊಸೂರು ಬಳಿ ನಡೆದಿದೆ. ಸಿದ್ದಾಪುರ ಗ್ರಾಮದ ಲಲಿತಾ (53) ಮೃತಪಟ್ಟಿದ್ದು, ಸ್ಕೂಟರ್ ಚಲಾಯಿಸುತ್ತಿದ್ದ ಸಿಂಚನಾ ಎಂಬ ಯುವತಿ ಸ್ಥಿತಿ ಗಂಭೀರವಾಗಿದೆ.
ಕೆಎಸ್ಆರ್ಟಿಸಿ ಬಸ್ ಮಡಿಕೇರಿಯಿಂದ ಮೈಸೂರಿಗೆ ಬರುತ್ತಿತ್ತು. ಅತ್ತೂರು ಕಡೆಯಿಂದ ಗುಡ್ಡೆಹೊಸೂರು ಕಡೆಗೆ ಬರುತ್ತಿದ್ದ ಸ್ಕೂಟಿ ಚಲಾಯಿಸಿಕೊಂಡು ಇಬ್ಬರು ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೃತ ಮಹಿಳೆ ಪರ್ಪಲ್ ಪಾಮ್ ರೆಸಾರ್ಟ್ ಸಿಬ್ಬಂದಿ ಎಂದು ತಿಳಿದುಬಂದಿದೆ.
ಇನ್ನು ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕುಶಾಲನಗರ ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -