Friday, May 3, 2024
spot_imgspot_img
spot_imgspot_img

ಬಸ್‌ಗೆ ಡಿಕ್ಕಿ ಹೊಡೆದ ಟಿಪ್ಪರ್; ಮೂವರಿಗೆ ಗಾಯ..!

- Advertisement -G L Acharya panikkar
- Advertisement -
This image has an empty alt attribute; its file name is balavikas-866x1024.jpg

ಕಿನ್ನಿಗೋಳಿ: ಕಿನ್ನಿಗೋಳಿ ಕಟೀಲು ಹೆದ್ದಾರಿಯ ಬಲ್ಲಾಣ ಚರ್ಚ್ ಬಳಿ ತಿರುವಿನಲ್ಲಿ ಟಿಪ್ಪರ್ ಬಸ್ಸಿಗೆ ಢಿಕ್ಕಿ ಹೊಡೆದಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಕಿನ್ನಿಗೋಳಿ ಪಕ್ಷಿಕೆರೆಯ ಮೂವರು ವಿದ್ಯಾರ್ಥಿಗಳು ಗಾಯಗೊಂಡು ಕಟೀಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಟೀಲು ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ರಾಜಶ್ರೀ ಎಂಬ ಹೆಸರಿನ ಬಸ್ಸಿಗೆ ಕಿನ್ನಿಗೋಳಿಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಬಸ್ ಹಾಗೂ ಟಿಪ್ಪರ್ ಗೆ ಹಾನಿಯಾಗಿದೆ. ಟಿಪ್ಪರ್ ನ ಸ್ಟೇರಿಂಗ್ ರಾಡ್ ತುಂಡಾದದ್ದು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!