Sunday, June 29, 2025
spot_imgspot_img
spot_imgspot_img

ಕಾರಿನ ಒಳಗೆ ಕುಳಿತು ಉದ್ಯಮಿ ಆತ್ಮಹತ್ಯೆ

- Advertisement -
- Advertisement -

ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯ ಖಾಲಿ ಪ್ರದೇಶದಲ್ಲಿ ಕಾರಿನ ಒಳಗೆ ಕುಳಿತು ಬೆಂಕಿಹಚ್ಚಿಕೊಂಡು ಹೋಟೆಲ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಗರಬಾವಿ ಎರಡನೇ ಹಂತದ 12ನೇ ಮುಖ್ಯರಸ್ತೆ ನಿವಾಸಿ, ಉದ್ಯಮಿ ಪ್ರದೀಪ್ (42) ಆತ್ಮಹತ್ಯೆ ಮಾಡಿಕೊಂಡವರು.ಶನಿವಾರ ಮಧ್ಯಾಹ್ನದ ವೇಳೆ ತಮ್ಮ ಸ್ಕೋಡಾ ಕಾರಿನಲ್ಲಿ ಬಂದಿದ್ದ ಪ್ರದೀಪ್ ಕಾರಿನಲ್ಲಿ ಕುಳಿತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರು ಸಂಪೂರ್ಣ ಭಸ್ಮವಾಗಿದೆ. ಮೃತದೇಹವು ಗುರುತಿಸಲಾರದಷ್ಟು ಸುಟ್ಟು ಹೋಗಿತ್ತು. ಕಾರು ಸಂಚರಿಸಿದ್ದ ಮಾರ್ಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಆಧರಿಸಿ ಗುರುತು ಪತ್ತೆ ಮಾಡಲಾಯಿತು’ ಎಂದು ಪೊಲೀಸರು ಹೇಳಿದರು.

- Advertisement -

Related news

error: Content is protected !!