Friday, May 3, 2024
spot_imgspot_img
spot_imgspot_img

ಉಳ್ಳಾಲ: ನೇತ್ರಾವತಿ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ; ಮುಳುಗುತ್ತಿರುವ ವಿಡಿಯೋ ಮೊಬೈಲ್‌ನಲ್ಲಿ ಸೆರೆ

- Advertisement -G L Acharya panikkar
- Advertisement -

ಉಳ್ಳಾಲ: ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಉದ್ಯಮಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಮುಗುಳಬಳ್ಳಿಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡರ ಪುತ್ರ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜನ ನೋಡುತ್ತಿದ್ದಂತೆ ನೀರಿಗೆ ಹಾರಿದ್ದು, ತಕ್ಷಣ ರಕ್ಷಣೆಗೆ ಧಾವಿಸಿದರೂ ಯುವಕ ನೀರುಪಾಲಾಗಿದ್ದಾರೆ. ಯುವಕ ಮುಳುಗುತ್ತಿರುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೈದ ವ್ಯಕ್ತಿಗಾಗಿ ಶೋಧ ಕಾರ್ಯ ಆರಂಭಗೊಂಡಿದೆ.

- Advertisement -

Related news

error: Content is protected !!