Saturday, June 6, 2026
spot_imgspot_img
spot_imgspot_img

ಪಾಕಿಸ್ತಾನದ ಪರ ಬೇಹುಗಾರಿಕೆ; ಉತ್ತರ ಪ್ರದೇಶದ ಉದ್ಯಮಿ ಬಂಧನ..!

- Advertisement -
- Advertisement -

ಲಕ್ನೋ: ಪಾಕಿಸ್ತಾನದಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ರಾಂಪುರದ ಉದ್ಯಮಿಯನ್ನು ಬಂಧಿಸಲಾಗಿದೆ.

ಪಾಕಿಸ್ತಾನದ ಇಂಟರ್-ಸರ್ವಿಸಸ್ ಇಂಟೆಲಿಜೆನ್ಸ್‌ಗಾಗಿ ಗಡಿಯಾಚೆಗಿನ ಕಳ್ಳಸಾಗಣೆ ಮತ್ತು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂಬ ಮಾಹಿತಿ ಆಧಾರದ ಮೇಲೆ ಶಹಜಾದ್‌ನನ್ನು ಉತ್ತರಪ್ರದೇಶದ ಎಸ್‌ಟಿಎಫ್ಪೊಲೀಸರು ಬಂಧಿಸಿದ್ದಾರೆ.

ಶಹಜಾದ್, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ರವಾನಿಸುತ್ತಿದ್ದ. ಅಲ್ಲದೇ ಒಂದು ವರ್ಷದಲ್ಲೇ ಹಲವು ಬಾರಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದ. ಗಡಿಯುದ್ದಕ್ಕೂ ಮೇಕಪ್ ವಸ್ತು, ಬಟ್ಟೆ, ಮಸಾಲೆ ಪದಾರ್ಥಗಳು ಮತ್ತು ಇನ್ನಿತರ ವಸ್ತುಗಳನ್ನು ಕಳ್ಳಸಾಗಾಟ ಮಾಡುತ್ತಿದ್ದ ಎಂದು ಎಸ್‌ಟಿಎಫ್ ತಿಳಿಸಿದೆ.

ಶಹಜಾದ್ ಭಾರತದಲ್ಲಿನ ಐಎಸ್‌ಐ ಏಜೆಂಟ್‌ಗಳಿಗೆ ಹಣ ಮತ್ತು ಭಾರತೀಯ ಸಿಮ್ ಕಾರ್ಡ್‌ಗಳನ್ನು ಒದಗಿಸುತ್ತಿದ್ದ. ರಾಮ್‌ಪುರ ಜಿಲ್ಲೆ ಮತ್ತು ಉತ್ತರ ಪ್ರದೇಶದ ಇತರ ಭಾಗಗಳಿಂದ ಜನರನ್ನು ಐಎಸ್‌ಐಗಾಗಿ ಕೆಲಸ ಮಾಡಲು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ. ಅಲ್ಲದೇ ಐಎಸ್‌ಐಗೆ ತೆರಳುತ್ತಿದ್ದ ಜನರ ವೀಸಾದ ವ್ಯವಸ್ಥೆಯನ್ನು ಐಎಸ್‌ಐ ಏಜೆಂಟ್‌ಗಳೇ ಮಾಡಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!