- Advertisement -
- Advertisement -



ಬೈಂದೂರು: ವ್ಯಕ್ತಿಯೋರ್ವರು ತೆಂಗಿನಕಾಯಿ ಹೆಕ್ಕಲು ಹೋದ ವೇಳೇ ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೈಂದೂರುನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬಡಾಕೆರೆ ನಿವಾಸಿ ಮಂಜುನಾಥ (85) ಎಂದು ಗುರುತಿಸಲಾಗಿದೆ.
ತೋಟಕ್ಕೆ ತೆಂಗಿನಕಾಯಿ ಹೆಕ್ಕಲು ಹೋದ ಇವರು, ಬಾವಿಯ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








