Sunday, June 29, 2025
spot_imgspot_img
spot_imgspot_img

ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಯನ್ನು ಖಂಡಿಸಿ ಬಿ.ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಯನ್ನು ಖಂಡಿಸಿ ಬಿ.ಸಿ ರೋಡ್ ನಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಯವರ ನೇತ್ರತ್ವದಲ್ಲಿ ಮೊಂಬತ್ತಿ ಜಾಥಾ ನಡೆಯಿತು.


ಈ ಸಂದರ್ಭದಲ್ಲಿ ಮಾತಾಡಿದ ರಮಾನಾಥ ರೈ ಯೋಗಿ ಆದಿತ್ಯನಾಥ್ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಯಲ್ಲಿ ವಿಫಲ ಆಗಿದ್ದು ಕೂಡಲೇ ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. “ಬೇಟಿ ಬಚಾವೋ ಬೇಟಿ ಬಚಾವೋ” ಎಂದು ಹೇಳುತ್ತಿರುವ ಕೇಂದ್ರ ಸರಕಾರ,ಅತ್ಯಾಚಾರ ಹಾಗೂ ಹತ್ಯೆಗಳನ್ನು ತಡೆಗಟ್ಟುವ ಕೆಲಸ ಮಾಡಿ ಇಂತಹ ಕ್ರೂರ ಘಟನೆ ನಡೆಯದಂತೆ ಜವಾಬ್ದಾರಿ ವಹಿಸಬೇಕೆಂದು ಒತ್ತಾಯಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮಹಮ್ಮದ್, ಚಂದ್ರ ಪ್ರಕಾಶ್‌ ಶೆಟ್ಟಿ ತುಂಬೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಅಬ್ಬಾಸ್ ಅಲಿ ಮೊದಲಾದವರು ಪಾಲ್ಗೊಂಡಿದ್ದರು.

- Advertisement -

Related news

error: Content is protected !!