- Advertisement -
- Advertisement -
ಬೆಂಗಳೂರು: ನಟ ಜಗ್ಗೇಶ್ ಅವರ ಪುತ್ರ ಗುರುರಾಜ್ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಅಪಘಾತಕ್ಕೀಡಾದ ಘಟನೆ ನಡೆದಿದೆ.
ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -