- Advertisement -
- Advertisement -
ನೆಲ್ಯಾಡಿ: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಕಾರೊಂದು ಪಲ್ಟಿಯಾದ ಘಟನೆ ನೆಲ್ಯಾಡಿ- ಕಡಬ ರಸ್ತೆಯ ಬಲ್ಯ ಭಜನಾ ಮಂದಿರದ ಬಳಿ ಸೋಮವಾರ ಸಂಜೆ ನಡೆದಿದೆ.
ಕಾರು ನೆಲ್ಯಾಡಿಯಿಂದ ಬಲ್ಯ ಮಾರ್ಗವಾಗಿ ಕಡಬಕ್ಕೆ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕಾರು ಪಲ್ಟಿಯಾಗಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಸೇರಿ, ಕಾರನ್ನು ರಸ್ತೆಗೆ ತರುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದವರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
- Advertisement -